2:27 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಮೇಲ್ಛಾವಣಿ ಕಾಮಗಾರಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

15/09/2022, 22:05

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಪರಿಸರದಲ್ಲಿ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನಮ್ಮ ಆಡಳಿತ ವ್ಯವಸ್ಥೆಯು ಹೆಚ್ಚಿನ ಮುತುವರ್ಜಿ ವಹಿಸಿದೆ. ಕಳೆದ ಸರಕಾರದ ಆಡಳಿತಕ್ಕೆ ಹೋಲಿಸಿದರೆ ನಮ್ಮ ಸರಕಾರವು ಹಿಂದೆಂದಿಗಿಂತಲೂ ಅಧಿಕ ಅನುದಾನಗಳನ್ನು ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನೀಡಿದೆ ಎಂದು ಹೇಳಿದರು. 

ಕುದ್ರೋಳಿ ‌ಶ್ರೀ ಭಗವತಿ ಕ್ಷೇತ್ರದ ಪರಿಸರದಲ್ಲಿ ಮೇಲ್ಛಾವಣಿ ಅಳವಡಿಕೆ ಕಾಮಗಾರಿ ಮಾಡಿಕೊಡುವಂತೆ ಸ್ಥಳೀಯ ಕಾರ್ಪೋರೇಟರ್ ಹಾಗೂ ಕ್ಷೇತ್ರದ ಆಡಳಿತ ಮಂಡಳಿಯ ಪ್ರಮುಖರು ಮನವಿ ನೀಡಿದ್ದರು. ಕ್ಷೇತ್ರದ ಅಭಿವೃದ್ಧಿಯ ನೆಲೆಯಲ್ಲಿ ಕಾಮಗಾರಿಗೆ ಅನುಮೋದನೆ ನೀಡಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ  ಕಾರ್ಪೋರೇಟರ್ ಜಯಶ್ರೀ ಕುಡ್ವ, ಲೀಲಾವತಿ ಪ್ರಕಾಶ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಆಚಾರಪಟ್ಟವರು, ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಮೊಕ್ತೇಸರರಾದ ನಾರಾಯಣ ಕೆ, ಸುಜನ್ ದಾಸ್ ಕುಡುಪು, ಉಪಾಧ್ಯಕ್ಷರಾದ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಸುಧೀರ್ ಬಿ, ಉಷಾ ಪ್ರಭಾಕರ್ ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು