7:01 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಮೇಲ್ಛಾವಣಿ ಕಾಮಗಾರಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

15/09/2022, 22:05

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಪರಿಸರದಲ್ಲಿ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನಮ್ಮ ಆಡಳಿತ ವ್ಯವಸ್ಥೆಯು ಹೆಚ್ಚಿನ ಮುತುವರ್ಜಿ ವಹಿಸಿದೆ. ಕಳೆದ ಸರಕಾರದ ಆಡಳಿತಕ್ಕೆ ಹೋಲಿಸಿದರೆ ನಮ್ಮ ಸರಕಾರವು ಹಿಂದೆಂದಿಗಿಂತಲೂ ಅಧಿಕ ಅನುದಾನಗಳನ್ನು ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನೀಡಿದೆ ಎಂದು ಹೇಳಿದರು. 

ಕುದ್ರೋಳಿ ‌ಶ್ರೀ ಭಗವತಿ ಕ್ಷೇತ್ರದ ಪರಿಸರದಲ್ಲಿ ಮೇಲ್ಛಾವಣಿ ಅಳವಡಿಕೆ ಕಾಮಗಾರಿ ಮಾಡಿಕೊಡುವಂತೆ ಸ್ಥಳೀಯ ಕಾರ್ಪೋರೇಟರ್ ಹಾಗೂ ಕ್ಷೇತ್ರದ ಆಡಳಿತ ಮಂಡಳಿಯ ಪ್ರಮುಖರು ಮನವಿ ನೀಡಿದ್ದರು. ಕ್ಷೇತ್ರದ ಅಭಿವೃದ್ಧಿಯ ನೆಲೆಯಲ್ಲಿ ಕಾಮಗಾರಿಗೆ ಅನುಮೋದನೆ ನೀಡಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ  ಕಾರ್ಪೋರೇಟರ್ ಜಯಶ್ರೀ ಕುಡ್ವ, ಲೀಲಾವತಿ ಪ್ರಕಾಶ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಆಚಾರಪಟ್ಟವರು, ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಮೊಕ್ತೇಸರರಾದ ನಾರಾಯಣ ಕೆ, ಸುಜನ್ ದಾಸ್ ಕುಡುಪು, ಉಪಾಧ್ಯಕ್ಷರಾದ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಸುಧೀರ್ ಬಿ, ಉಷಾ ಪ್ರಭಾಕರ್ ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು