3:52 PM Thursday8 - May 2025
ಬ್ರೇಕಿಂಗ್ ನ್ಯೂಸ್
Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:…

ಇತ್ತೀಚಿನ ಸುದ್ದಿ

Kudroli Temple | ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ: ಬಲಿ ಉತ್ಸವ, ಶಯನೋತ್ಸವ

21/02/2025, 22:06

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು.
ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ ಕಾರ್ಯಕ್ರಮ, ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿತು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಉಪಾಧ್ಯಕ್ಷೆ ಊರ್ಮಿಳಾರಮೇಶ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರ್, ಜಗದೀಪ್ ಡಿ. ಸುವರ್ಣ, ಎಂ.ಶೇಖರ್ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಕೃತಿನ್ ಅಮೀನ್, ವೇದಕುಮಾರ್, ಎನ್ ಹರೀಶ್ಚಂದ್ರ, ಎಚ್.ಎಸ್ ಜೈರಾಜ್, ಲೀಲಾಕ್ಷ ಕರ್ಕೇರ, ಚಂದನ್‌ದಾಸ್, ಗೌರವಿ ಪಿ.ಕೆ., ಕಿಶೋರ್ ದಂಡೇಕೇರಿ, ಲತೀಶ್ ಸುವರ್ಣ, ಬಿ.ವಾಸುದೇವ ಕೋಟ್ಯಾನ್ ಮೊದಲಾದವರಿದ್ದರು.
*ಮಹಾಶಿವರಾತ್ರಿ:*
26ರಂದು ಮಹಾಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, 12.15ಕ್ಕೆ ಮಹಾಪೂಜೆ, ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ, ರಾತ್ರಿ 1ಗಂಟೆಗೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ, ರಥೋತ್ಸವ, ಕೆರೆದೀಪ, ಮಂಟಪ ಪೂಜೆ ನೆರವೇರಲಿದೆ. 27ರಮದು ಬೆಳಗ್ಗೆ 10ಕ್ಕೆ ತತ್ವ ಹೋಮ, 12.15ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ಮಧ್ಯಾಹ್ನ 1ಕ್ಕೆ ಮಹಾ ಅನ್ನಸಂತರ್ಪಣೆ, ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ ಅವಭೃತ ಸ್ನಾನ (ಓಕುಳಿ), 28ರಂದು ಮಧ್ಯಾಹ್ನ 11ಕ್ಕೆ ಧ್ವಜ ಅವರೋಹಣ, ರಾತ್ರಿ 7.30ಕ್ಕೆ ಗುರುಪೂಜೆ ನೆರವೇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು