7:48 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು