3:44 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು