3:07 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು