11:03 AM Saturday6 - June 2026
ಬ್ರೇಕಿಂಗ್ ನ್ಯೂಸ್
ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು