6:39 PM Saturday1 - August 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು