1:13 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು