7:52 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು