7:03 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು