4:21 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು