8:18 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು