6:54 PM Friday21 - March 2025
ಬ್ರೇಕಿಂಗ್ ನ್ಯೂಸ್
ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ… ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ… Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ… ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ… ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ.… Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ… ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ಬೇಡಿಕೆ… ರಾಜ್ಯದ ನೀರಾವರಿ ಯೋಜನೆಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬೊಮ್ಮಾಯಿ: ಕೃಷ್ಣಾ ಮೇಲ್ದಂಡೆ, ಮಹಾದಾಯಿ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು