6:40 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಆಯ್ಕೆ

17/07/2024, 23:46

ಮಂಗಳೂರು(reporterkarnataka.com)::ಕುದ್ರೋಳಿ ಯುವಕ ಸಂಘದ 62ನೇ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅಶೋಕ್ ಕುಮಾರ್ ಕೆ. ವಹಿಸಿದ್ದರು. ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರಾಜೇಶ್ ಕುದ್ರೋಳಿ ಮಂಡಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಕೆ. ದಿನೇಶ್ ಅಂಚನ್ ಮಂಡಿಸಿದರು.
2024-25ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಶೋಕ್ ಕುಮಾರ್ ಕೆ, ಅಧ್ಯಕ್ಷರಾಗಿ ಆಯ್ಕೆಗೊಂಡರು. ಗೌರವ ಅಧ್ಯಕ್ಷರಾಗಿ ಶಂಕರ ಬರ್ಕೆ, ಉಪಾಧ್ಯಕ್ಷರಾಗಿ ರವೀಂದ್ರಆರ್.ಆರ್., ಕಾರ್ಯದರ್ಶಿಯಾಗಿ ರಾಜೇಶ್ ಕುದ್ರೋಳಿ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಕೋಶಾಧಿಕಾರಿಯಾಗಿ ಕೆ. ದಿನೇಶ್ ಅಂಚನ್, ಕ್ರೀಡಾ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರವಿ ಅಮೀನ್, ಕಲಾ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಜೊತೆ ಕಲಾ ಕಾರ್ಯದರ್ಶಿಯಾಗಿ ಸುರೇಂದ್ರ ಶೆಟ್ಟಿಗಾರ್, ಕಚೇರಿ ಕಾರ್ಯದರ್ಶಿಗಳಾಗಿ ನಾಗರಾಜ್ ಹಾಗೂ ಯಾದವ ಅವರು ಆಯ್ಕೆಗೊಂಡರು. ಸಮಿತಿ ಸದಸ್ಯರುಗಳಾಗಿ ದೇಜು ಅಂಚನ್, ಮಿತ್ರಹೆರಾಜೆ, ನಾರಾಯಣ ಕರ್ಕೇರ, ಪ್ರಮೋದ್ ಕುದ್ರೋಳಿ ರವೀಂದ್ರ ಅಮೀನ್ ಹಾಗೂ ಕಿಶೋರ್ ಕುಮಾರ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಮಹಿಳಾ ಸಮಿತಿಯ ಸಂಚಾಲಕಿಯಾಗಿ ಸುಮನ್ ಸುನಿಲ್, ಸಹ ಸಂಚಾಲಕಿಯಾಗಿ ಭಾನುಮತಿ ಅವರನ್ನು ಆಯ್ಕೆ ಮಾಡಲಾಯಿತು.
ಸಂಘದ ಹಿರಿಯ ಸದಸ್ಯರಾದ ಮಿತ್ರಹೆರಾಜೆ ಹಾಗೂ ಕೃಷ್ಣಪ್ಪ ಗಟ್ಟಿ ಮತ್ತು ಸುನೀಲ್ ಕುಮಾರ್ ಅವರು ಮಾತನಾಡಿ ಎಲ್ಲಾ ಸದಸ್ಯರು ಸಂಘದ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮ ಹಾಕಿಕೊಂಡು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದರು. ಸಂಘದ ಅಧ್ಯಕ್ಷರು ಮಾತನಾಡಿ ಸಂಘದ ಎಲ್ಲಾ ಕೆಲಸ ಕಾರ್ಯಕ್ಕೆ ಸಂಘದ ಎಲ್ಲ ಸದಸ್ಯರ ಸಹಕಾರ ಕೇಳಿದರು. 61ನೇ ವಾರ್ಷಿಕೋತ್ಸವ ಹಾಗೂ ಲಕ್ಕಿಡಿಪ್ ಯಶಸ್ಸಿಗೆ ಸಹಕರಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು