5:07 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಆಯ್ಕೆ

17/07/2024, 23:46

ಮಂಗಳೂರು(reporterkarnataka.com)::ಕುದ್ರೋಳಿ ಯುವಕ ಸಂಘದ 62ನೇ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅಶೋಕ್ ಕುಮಾರ್ ಕೆ. ವಹಿಸಿದ್ದರು. ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರಾಜೇಶ್ ಕುದ್ರೋಳಿ ಮಂಡಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಕೆ. ದಿನೇಶ್ ಅಂಚನ್ ಮಂಡಿಸಿದರು.
2024-25ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಶೋಕ್ ಕುಮಾರ್ ಕೆ, ಅಧ್ಯಕ್ಷರಾಗಿ ಆಯ್ಕೆಗೊಂಡರು. ಗೌರವ ಅಧ್ಯಕ್ಷರಾಗಿ ಶಂಕರ ಬರ್ಕೆ, ಉಪಾಧ್ಯಕ್ಷರಾಗಿ ರವೀಂದ್ರಆರ್.ಆರ್., ಕಾರ್ಯದರ್ಶಿಯಾಗಿ ರಾಜೇಶ್ ಕುದ್ರೋಳಿ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಕೋಶಾಧಿಕಾರಿಯಾಗಿ ಕೆ. ದಿನೇಶ್ ಅಂಚನ್, ಕ್ರೀಡಾ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರವಿ ಅಮೀನ್, ಕಲಾ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಜೊತೆ ಕಲಾ ಕಾರ್ಯದರ್ಶಿಯಾಗಿ ಸುರೇಂದ್ರ ಶೆಟ್ಟಿಗಾರ್, ಕಚೇರಿ ಕಾರ್ಯದರ್ಶಿಗಳಾಗಿ ನಾಗರಾಜ್ ಹಾಗೂ ಯಾದವ ಅವರು ಆಯ್ಕೆಗೊಂಡರು. ಸಮಿತಿ ಸದಸ್ಯರುಗಳಾಗಿ ದೇಜು ಅಂಚನ್, ಮಿತ್ರಹೆರಾಜೆ, ನಾರಾಯಣ ಕರ್ಕೇರ, ಪ್ರಮೋದ್ ಕುದ್ರೋಳಿ ರವೀಂದ್ರ ಅಮೀನ್ ಹಾಗೂ ಕಿಶೋರ್ ಕುಮಾರ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಮಹಿಳಾ ಸಮಿತಿಯ ಸಂಚಾಲಕಿಯಾಗಿ ಸುಮನ್ ಸುನಿಲ್, ಸಹ ಸಂಚಾಲಕಿಯಾಗಿ ಭಾನುಮತಿ ಅವರನ್ನು ಆಯ್ಕೆ ಮಾಡಲಾಯಿತು.
ಸಂಘದ ಹಿರಿಯ ಸದಸ್ಯರಾದ ಮಿತ್ರಹೆರಾಜೆ ಹಾಗೂ ಕೃಷ್ಣಪ್ಪ ಗಟ್ಟಿ ಮತ್ತು ಸುನೀಲ್ ಕುಮಾರ್ ಅವರು ಮಾತನಾಡಿ ಎಲ್ಲಾ ಸದಸ್ಯರು ಸಂಘದ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮ ಹಾಕಿಕೊಂಡು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದರು. ಸಂಘದ ಅಧ್ಯಕ್ಷರು ಮಾತನಾಡಿ ಸಂಘದ ಎಲ್ಲಾ ಕೆಲಸ ಕಾರ್ಯಕ್ಕೆ ಸಂಘದ ಎಲ್ಲ ಸದಸ್ಯರ ಸಹಕಾರ ಕೇಳಿದರು. 61ನೇ ವಾರ್ಷಿಕೋತ್ಸವ ಹಾಗೂ ಲಕ್ಕಿಡಿಪ್ ಯಶಸ್ಸಿಗೆ ಸಹಕರಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು