7:49 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ: ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ

19/08/2024, 22:30

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘದ ವತಿಯಿಂದ ನಗರದ ಕುದ್ರೋಳಿಯಲ್ಲಿ ಸ್ವಾತಂತ್ರ ದಿನಾಚರಣೆ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪುಷ್ಪರಾಜ್ ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹೋಟೆಲ್ ಉದ್ಯಮಿಯಾದ ಕೆ. ಸುಧಾಕರ್ ಆಳ್ವ ಅವರು ಭಾಗವಹಿಸಿದರು. ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಜರುಗಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಸಂಘದ ಸದ್ಯಸರು ಹಾಗೂ ಮಹಿಳಾ ಸಮಿತಿಯ ಸದ್ಯಸರಿಗೆ ಬಹುಮಾನಗಳನ್ನು ನೀಡಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗ್ರಾಮದ ಬೀದಿ ವ್ಯಾಪಾರಿಗಳಿಗೆ ಉದ್ಯಮಿಯಾದ ವಿವೇಕ್ ರಾಜ್ ಪೂಜಾರಿ ನೀಡಿರುವ ಕೊಡೆಗಳನ್ನು ವಿತರಣೆ ಮಾಡಲಾಯಿತು. ಸಂಘದ ಗೌರವ ಅಧ್ಯಕ್ಷ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್. ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಮಹಿಳಾ ಸಂಚಾಲಕಿತಿ ಸುಮನ್ ಸುನಿಲ್, ಸಹ ಸಂಚಾಲಕಿ ಬಾನುಮತಿ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಪುಷ್ಪರಾಜ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಶಿಲ್ಪಾ ಸನ್ಮಾನ ಪತ್ರ ವಾಚಿಸಿದರು. ಸಂಘದ ಅಧ್ಯಕ್ಷರ ಅಶೋಕ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು. ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು