8:57 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಕುಡುಕ ಚಾಲಕನಿಗೆ ‘ವಿಶಿಷ್ಟ ಶಿಕ್ಷೆ’: ಕುಡಿತದ ಕೇಡಿನ ಬಗ್ಗೆ ರಸ್ತೆಯಲ್ಲಿ ಕರಪತ್ರ ಹಂಚಲು ಮದ್ರಾಸ್ ಹೈಕೋರ್ಟ್‌ ಅದೇಶ

14/09/2022, 14:04

ಚೆನ್ನೈ(reporterkarnataka.com): ಮದ್ಯಪಾನ‌ ಮಾಡಿ ವಾಹನ ಚಲಾಯಿಸಿ 3 ಮಂದಿ ಪಾದಚಾರಿಗಳಿಗೆ ಗಾಯಗೊಳಿಸಿದ ಚಾಲಕನಿಗೆ ಮದ್ರಾಸ್ ಹೈಕೋರ್ಟ್ ವಿಶಿಷ್ಟ ಶಿಕ್ಷೆ ಪ್ರಕಟಿಸಿದೆ.

ನಗರದ ಜನನಿಬಿಡ ಜಂಕ್ಷನ್‌ನಲ್ಲಿ 2 ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಅವರು ಈ ನಿರ್ದೇಶನ ನೀಡಿದ್ದಾರೆ.

25,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಮತ್ತಿತರ ಷರತ್ತಿನೊಂದಿಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಅರ್ಜಿದಾರರು ಎರಡು ವಾರಗಳ ಕಾಲ ಪ್ರತಿದಿನ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಲ್ಲದೇ ಅಗತ್ಯವಿರುವಾಗ ಪೊಲೀಸರ ಮುಂದೆ ವರದಿ ಮಾಡಬೇಕು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು