6:10 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಲಾಂಛನ ಅನಾವರಣ

12/12/2023, 17:54

ಬೆಳಗಾವಿ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5, 6 ಮತ್ತು 7ರಂದು 3 ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟವನ್ನ ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.

ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು