5:48 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕುಕ್ಕರ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಸರ್ವ ರೀತಿಯಲ್ಲೂ ಸಹಕಾರ: ಶಾಸಕ ವೇದವ್ಯಾಸ ಕಾಮತ್

22/12/2022, 12:35

ಮಂಗಳೂರು(reporterkarnataka.com): ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರಿಗೆ ಸರ್ವ ರೀತಿಯಲ್ಲೂ ಸಹಕಾರ ನೀಡುತಿದ್ದು, ಭಯೋತ್ಪಾದನಾ ಚಟುವಟಿಕೆಗಳಂತಹ ಹೀನ ಕೃತ್ಯಗಳಲ್ಲಿ ರಾಜಕೀಯ ಬೇಳೆ ಬೇಯಿಸುವುದು ಸರಿಯಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ನಗರದ ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಕುಟುಂಬದ ಜೊತೆ ಸಂಪರ್ಕದಲ್ಲಿದ್ದೇನೆ. ಈಗಾಗಲೇ ಬಿಜೆಪಿ ಮಂಡಲದ ಪ್ರಮುಖರು ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿ ಅವರನ್ನು ಭೇಟಿ ಮಾಡಿದ್ದು, ಅವರ ಮೂಲಕ ವೈಯಕ್ತಿಕ ನೆಲೆಯಲ್ಲಿ ಧನ ಸಹಾಯವನ್ನು ನೀಡಲಾಗಿದೆ. ನಮ್ಮ ಕಾರ್ಯಕರ್ತರು ಕುಟುಂಬದ ಸದಸ್ಯರ ಜೊತೆಗಿದ್ದು ಅವಶ್ಯಕತೆಗಳಿಗೆ ಸ್ಪಂದಿಸುತಿದ್ದಾರೆ ಎಂದರು‌.

ಪರಿಹಾರ ಧನ ಒದಗಿಸುವ ಕುರಿತು ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಿಯಮಗಳಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪರಿಹಾರ ಧನ ಬಿಡುಗಡೆಯಾಗಲಿದೆ. ಪುರುಷೋತ್ತಮ ಪೂಜಾರಿ ಅವರಿಗೆ ಜೀವನೋಪಾಯಕ್ಕಾಗಿ ಆಟೋ ರಿಕ್ಷಾ ಕೊಡಿಸಲು ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು. ಹಿಂದಿನ ಪರ್ಮಿಟ್ ನಲ್ಲಿ ಹೊಸದಾಗಿ ಆಟೋ ರಿಕ್ಷಾ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜಗದೀಶ್ ಶೇಣವ, ಕಾರ್ಪೋರೇಟರ್ ಸಂದೀಪ್ ಗರೋಡಿ, ಸುರೇಂದ್ರ ಜಪ್ಪಿನಮೊಗರು,ಕಿರಣ್ ರೈ ಮುಂತಾದವರು ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿ ಪುರುಷೋತ್ತಮ ಪೂಜಾರಿ ಅವರನ್ನು ಹಾಗೂ ವೈದ್ಯರನ್ನು ಭೇಟಿ ಮಾಡಿ ಮಾಹಿತಿ ಪಡೆದು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು