3:11 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಪನ್ನ: ಭಕ್ತ ಸಾಗರದ ನಡುವೆ ಮಹಾರಥೋತ್ಸವ

07/12/2024, 12:35

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪವಿತ್ರ ಯಾತ್ರಾ ಸ್ಥಳಗಳಲ್ಲೊಂದಾದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಚಂಪಾಷಷ್ಠಿ ಮಹೋತ್ಸವ ಸಂಪನ್ನಗೊಂಡಿತು.


ದೇಗುಲದಲ್ಲಿ ಇಂದು ಮುಂಜಾನೆ 6:57ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ಭಕ್ತಿ- ಶ್ರದ್ದೆಯಿಂದ ಜರುಗಿತು. ದೇಗುಲದ ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ ಚಿಕ್ಕ ರಥೋತ್ಸವವೂ ಸಂಭ್ರಮ- ಸಡಗರದಲ್ಲಿ ನಡೆಯಿತು.
ಆರಂಭದಲ್ಲಿ ಸುವರ್ಣ ವೃಷ್ಠಿ ಮಾಡಲಾಯಿತು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ನಂತರ ಷಷ್ಠಿ ಕಟ್ಟೆ ಮತ್ತು ಒಳಾಂಗಣದ ಕಟ್ಟೆಯಲ್ಲಿ ಸುಬ್ರಹ್ಮಣ್ಯ ದೇವರು ಮತ್ತು ಉಮಾಮಹೇಶ್ವರ ದೇವರಿಗೆ ಪೂಜೆ ನಡೆಯಿತು. ಈ ದೃಶ್ಯವನ್ನು ಸಹಸ್ರ ಸಹಸ್ರ ಕಣ್ಣುಗಳು ತುಂಬಿಕೊಂಡವು.

ಇತ್ತೀಚಿನ ಸುದ್ದಿ

ಜಾಹೀರಾತು