6:21 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಪನ್ನ: ಭಕ್ತ ಸಾಗರದ ನಡುವೆ ಮಹಾರಥೋತ್ಸವ

07/12/2024, 12:35

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪವಿತ್ರ ಯಾತ್ರಾ ಸ್ಥಳಗಳಲ್ಲೊಂದಾದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಚಂಪಾಷಷ್ಠಿ ಮಹೋತ್ಸವ ಸಂಪನ್ನಗೊಂಡಿತು.


ದೇಗುಲದಲ್ಲಿ ಇಂದು ಮುಂಜಾನೆ 6:57ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ಭಕ್ತಿ- ಶ್ರದ್ದೆಯಿಂದ ಜರುಗಿತು. ದೇಗುಲದ ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ ಚಿಕ್ಕ ರಥೋತ್ಸವವೂ ಸಂಭ್ರಮ- ಸಡಗರದಲ್ಲಿ ನಡೆಯಿತು.
ಆರಂಭದಲ್ಲಿ ಸುವರ್ಣ ವೃಷ್ಠಿ ಮಾಡಲಾಯಿತು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ನಂತರ ಷಷ್ಠಿ ಕಟ್ಟೆ ಮತ್ತು ಒಳಾಂಗಣದ ಕಟ್ಟೆಯಲ್ಲಿ ಸುಬ್ರಹ್ಮಣ್ಯ ದೇವರು ಮತ್ತು ಉಮಾಮಹೇಶ್ವರ ದೇವರಿಗೆ ಪೂಜೆ ನಡೆಯಿತು. ಈ ದೃಶ್ಯವನ್ನು ಸಹಸ್ರ ಸಹಸ್ರ ಕಣ್ಣುಗಳು ತುಂಬಿಕೊಂಡವು.

ಇತ್ತೀಚಿನ ಸುದ್ದಿ

ಜಾಹೀರಾತು