11:52 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು