4:28 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು