8:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು