9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು