12:34 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕುಕ್ಕಿಕಟ್ಟೆಯಲ್ಲಿ ಬೈಕ್ ಸ್ಕಿಡ್: ಸಹ ಸವಾರ ಸಾವು 

05/06/2022, 10:43

ಹಿರಿಯಡ್ಕ(reporterkarnataka.com):

ಪಲ್ಸರ್ ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಜೂನ್ 3ರಂದು‌ ನಡೆದಿದೆ.

ಮೃತರನ್ನು ಕೊಳಲಗಿರಿಯ ಲಿಗೋರಿ ಡಿಸೋಜ ಎಂದು ಗುರುತಿಸಲಾಗಿದೆ. ಲಿಗೋರಿ ಡಿಸೋಜ ಜೂ.3ರಂದು ಕೆಲಸದ ನಿಮಿತ್ತ ಜಾಯಿಲ್ ಡಿಸೋಜ ಎಂಬವರ ಪಲ್ಸರ್ ಬೈಕ್ ನಲ್ಲಿ ಕುಕ್ಕೆಹಳ್ಳಿಗೆ ಹೋಗಿದ್ದರು. ಅಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳಿ ಬರುತ್ತಿದ್ದ ವೇಳೆ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ಸಹಸವಾರ ಲಿಗೋರಿಯವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ತಕ್ಷಣವೇ ಅದೇ ದಾರಿಯಲ್ಲಿ ಹೋಗುತ್ತಿದ್ದ. ವೀರೇಂದ್ರ ಆಚಾರ್ ಹಾಗೂ ಅಶ್ವಿನ್ ಎಂಬವರು ಮಣಿಪಾಲ ಕೆಎಂಸಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಿಗೋರಿ ಮೃತಪಟ್ಟಿದ್ದಾರೆ. ಸವಾರ ಜಾಯಿಲ್‌ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು