9:51 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ಘೋರ ದುರಂತಕ್ಕೆ ಮೇಘಸ್ಫೋಟ ಕಾರಣ?: ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರು ಮೃತ್ಯು

02/08/2022, 10:17

ಸುಬ್ರಹ್ಮಣ್ಯ(reporterkarnataka.com): ದೇಶದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ್ದು, ಗುಡ್ಡ ಜರಿದು ಮಣ್ಣಿನಡಿ ಬಿದ್ದ ಮನೆಯೊಳಗೆ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಕುಮಾರಧಾರ ಪರ್ವತಮುಖಿ ಬಳಿಯ ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲಾಗಿದ್ದು, ನಿರಂತರ ಕಾರ್ಯಾಚರಣೆ ಬಳಿಕ ತಡರಾತ್ರಿ ಮೃತದೇಹಗಳನ್ನು ಹೊರತೆಗೆಯಲಾಯಿತು.

ಮೇಘಸ್ಪೋಟ ಮತ್ತು‌ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಎರಡು ದಿನ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಸಂಪಾಜೆ ಕಲ್ಲುಗುಂಡಿಯಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ಕಾರ್ ಗಳು ನೀರಿನಲ್ಲಿ ತೇಲಿವೆ. ಸಂಪಾಜೆ, ಕಲ್ಲುಗುಂಡಿ ಪರಿಸರದಲ್ಲಿ ಅಧಿಕ ಮಳೆಯಾಗುತ್ತಿದ್ದು. ಅಪಾಯದಲ್ಲಿದ್ದ 15 ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಕೊಡಗಿನ ಜೋಡುಪಾಲದಂತೆ ಅರೆಕಲ್ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿರುವ ಶಂಕೆ ವ್ಯಕ್ತಿವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು