11:08 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕುಕ್ಕುಟ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ: ಐಸಿಎಆರ್-ಎನ್‍ಐಎಎನ್‍ಪಿ ಜತೆಗೆ ಕೆಪಿಎಫ್‍ಬಿಎ ಒಪ್ಪಂದಕ್ಕೆ ಸಹಿ

28/05/2023, 17:30

ಮಂಗಳೂರು(reporterkarnataka.com): ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (ಎನ್‍ಐಎಎನ್‍ಪಿ) ಜತೆಗೆ ಶುಕ್ರವಾರ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (ಕೆಪಿಎಫ್‍ಬಿಎ) ನೊಂದಿಗೆ ಕುಕ್ಕುಟ ಕ್ಷೇತ್ರದಲ್ಲಿ ಹೆಚ್ಚಿನ ಸಹಯೋಗದ ಸಂಶೋಧನೆಗಾಗಿ ತಿಳುವಳಿಕಾ ಒಪ್ಪಂದ(ಎಂಒಯು)ಗೆ ಸಹಿ ಹಾಕಲಾಯಿತು.

ಬೆಂಗಳೂರಿನ ಐಸಿಎಆರ್-ಎನ್‍ಐಎಎನ್‍ಪಿ ನಿರ್ದೇಶಕ ಡಾ.ರಾಘವೇಂದ್ರ ಭಟ್ ಮತ್ತು ಕೆಪಿಫ್‍ಬಿಎ ಅಧ್ಯಕ್ಷ ಡಾ.ಬಿ. ಸುಶಾಂತ್ ರೈ ಒಪ್ಪಂದಕ್ಕೆ ಸಹಿ ಹಾಕಿದರು.
ಕುಕ್ಕುಟೋದ್ಯಮ ಕ್ಷೇತ್ರವು ಅಗಾದ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಸಂಸ್ಥೆಯ ಸಹಯೋಗದಿಂದ ಸಂಶೋಧನೆಯ ಅವಶ್ಯಕತೆ, ವಿಶೇಷವಾಗಿ ಕುಕ್ಕುಟಗಳ ಪೋಷಣೆ ಕ್ಷೇತ್ರದಲ್ಲಿ ಅಗುತ್ತಿರುವ ವಿಚಾರಗಳು, ಪೌಷ್ಠಿಕಾಂಶದ ಸವಾಲುಗಳನ್ನು ವೈಜ್ಞಾನಿಕ ರೀತಿಯಲ್ಲಿ ಎದುರಿಸಲು ಎರಡೂ ಸಂಸ್ಥೆಗಳು ತಾಂತ್ರಿಕ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಕುಕ್ಕುಟಗಳ ಆರೋಗ್ಯದ ಮಹತ್ವವನ್ನು ಒತ್ತಿಹೇಳುತ್ತವೆ ಮತ್ತು ಪರಿಣಾಮವಾಗಿ ಅಂತಿಮ ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನಗಳನ್ನು ನೀಡಲು ಇದು ಸಹಕಾರಿಯಾಗುತ್ತದೆ.
ಐಸಿಎಆರ್-ಎನ್‍ಐಎಎನ್‍ಪಿ ನಿರ್ದೇಶಕ ಡಾ.ರಾಘವೇಂದ್ರ ಭಟ್ ಮಾತನಾಡಿ, ಇಂತಹ ಒಪ್ಪಂದ ಮೂಲಕ ಸಂಸ್ಥೆಯಲ್ಲಿ ಅಗುತ್ತಿರುವ ಸಂಶೋಧನೆಗಳು ಅದರಿಂದ ಸಿಗುವ ಜ್ಞಾನ ಕುಕ್ಕುಟ ಕ್ಷೇತ್ರದ ಬೆಳವಣಿಗೆ ಪೂರಕವಾಗಲಿದೆ ಎಂದರು.
ಕೆಪಿಎಫ್‍ಬಿಎ ಚಟುವಟಿಕೆಗಳ ಬಗ್ಗೆ ವಿವರ ನೀಡಿದ ಡಾ.ಸುಶಾಂಶ್ ರೈ, ಕರ್ನಾಟಕದಲ್ಲಿ ಕುಕ್ಕುಟ ಸಾಕಾಣಿಕೆ ಕ್ಷೇತ್ರವು ಸಂಘಟಿತ ಮತ್ತು ಅಸಂಘಟಿತವಾಗಿ ಬಹಳ ದೊಡ್ಡದಾಗಿದೆ ಮತ್ತು ಗುಣಮಟ್ಟದ ಉತ್ಪನ್ನಗಳನ್ನು ನೀಡುವುದಲ್ಲದೆ ವಿಶ್ವ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿರಲು ಪೌಷ್ಠಿಕಾಂಶದ ಬಗ್ಗೆ ವೈಜ್ಞಾನಿಕ ಒಳಹರಿವಿನ ಅಗತ್ಯವಿದೆ. ಇದಕ್ಕೆ ಈ ಸಂಸ್ಥೆ ಜತೆಗಿನ ಒಪ್ಪಂದ ನೆರವಾಗಲಿದೆ ಎಂದರು.
ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಎಂ.ಸಿ.ಆರ್.ಶೆಟ್ಟಿ, ಕೆಪಿಎಫ್‍ಬಿಎ ತಾಂತ್ರಿಕ ಸಮಿತಿಯ ಅಧ್ಯಕ್ಷ ಡಾ.ಜಿ.ಬಿ.ಪುಟ್ಟಣ್ಣಯ್ಯ, ಪ್ರಧಾನ ಕಾರ್ಯದರ್ಶಿ ಡಾ.ಅಂಜನ್ ಗೋಸ್ವಾಮಿ, ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್, ಕೆಪಿಎಫ್‍ಬಿಎ ಹಿರಿಯ ವಿಜ್ಞಾನಿ ಡಾ.ಉಮಾಕಾಂತ ಬಿ. ಐಸಿಎಆರ್-ಎನ್‍ಐಎಎನ್‍ಪಿಯ ಪ್ರಧಾನ ವಿಜ್ಞಾನಿ ಡಾ.ಎ.ವಿ.ಇಳಂಗೋವನ್, ಪ್ರಧಾನ ವಿಜ್ಞಾನಿ ಡಾ.ಕೆ.ವಿ.ಎಚ್.ಶಾಸ್ತ್ರಿ, ಐ.ಸಿ ಪಿಎಂಇ ಡಾ.ಡಿ.ಟಿ.ಪಾಲ್ ಮತ್ತು ಐ.ಸಿ ಐಟಿಎಂಯು ಡಾ.ಅತುಲ್ ಪಿ ಕೋಲ್ಟೆ ಪ್ರತಿನಿಧಿಗಳಾಗಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು