5:13 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

03/08/2023, 20:26

ಬೆಂಗಳೂರು(reporterkarnataka.com): ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್(ಕೆಪಿಎಫ್‍ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪೂರಕವಾಗಿ ಸ್ಪಂದಿಸುವ ಜತೆಗೆ ಸಮಸ್ಯೆ ಪರಿಹಾರಕ್ಕೆ ಭರವಸೆಯನ್ನು ನೀಡಿದರು.
ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ ನೇತೃತ್ವದ ನಿಯೋಗದಿಂದ ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ವಿದ್ಯುತ್ ದರ ಹೆಚ್ಚಳದಿಂದ ಕುಕ್ಕುಟೋದ್ಯಮಕ್ಕೆ ಹೊರೆಯಾಗಿದ್ದು, ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ. ಅಷ್ಟೇ ಅಲ್ಲದೆ ಕೆಲವು ಕೋಳಿ ಘಟಕಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.
ಡಾ. ಸುಶಾಂತ್ ರೈ ಅವರು ಸಂಘದ ಚಟುವಟಿಕೆಗಳು, ಅದರ ಅತ್ಯಾಧುನಿಕ ರೋಗ ನಿರ್ಣಯ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರ ಮತ್ತು ಕೋಳಿ ವಲಯವನ್ನು ಉತ್ತೇಜಿಸಲು ಸರಕಾರ ಮತ್ತು ಸದಸ್ಯರೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ತಿಳಿಸಿದರು.
ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ಅವರು ಕರ್ನಾಟಕದಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರವು ಬೆಳೆದಿರುವ ಹಾಗೂ ಇನ್ನೂ ಹೆಚ್ಚಿನ ಬೆಳವಣಿಗೆಗೆ ಬೇಕಾದ ಸಾಮಾರ್ಥ್ಯವಿದ್ದು ಅದಕ್ಕೆ ಸಚಿವಾಲಯದ ಬೆಂಬಲ ಕೋರಿದರು. ಕೋಳಿ ಸಾಕಾಣಿಕೆ ಕ್ಷೇತ್ರದಲ್ಲಿ ಕೆಪಿಎಫ್‍ಬಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಕೋಳಿ ಸಾಕಾಣೆದಾರರಿಗೆ ಪ್ರಯೋಜನವಾಗುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಸಚಿವರು ತಿಳಿಸಿದರು. ಕೆಪಿಎಫ್‍ಬಿಎ ನಿಯೋಗ ಸಚಿವ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿತು. ಈ ಸಂದರ್ಭ ಎಸ್.ಆರ್.ಆಗ್ರೋ ಫಾರ್ಮ್ಸ್‍ನ ರಾಜೇಶ್ ರೆಡ್ಡಿ ಮತ್ತು ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು