11:15 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

03/08/2023, 20:26

ಬೆಂಗಳೂರು(reporterkarnataka.com): ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್(ಕೆಪಿಎಫ್‍ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪೂರಕವಾಗಿ ಸ್ಪಂದಿಸುವ ಜತೆಗೆ ಸಮಸ್ಯೆ ಪರಿಹಾರಕ್ಕೆ ಭರವಸೆಯನ್ನು ನೀಡಿದರು.
ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ ನೇತೃತ್ವದ ನಿಯೋಗದಿಂದ ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ವಿದ್ಯುತ್ ದರ ಹೆಚ್ಚಳದಿಂದ ಕುಕ್ಕುಟೋದ್ಯಮಕ್ಕೆ ಹೊರೆಯಾಗಿದ್ದು, ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ. ಅಷ್ಟೇ ಅಲ್ಲದೆ ಕೆಲವು ಕೋಳಿ ಘಟಕಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.
ಡಾ. ಸುಶಾಂತ್ ರೈ ಅವರು ಸಂಘದ ಚಟುವಟಿಕೆಗಳು, ಅದರ ಅತ್ಯಾಧುನಿಕ ರೋಗ ನಿರ್ಣಯ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರ ಮತ್ತು ಕೋಳಿ ವಲಯವನ್ನು ಉತ್ತೇಜಿಸಲು ಸರಕಾರ ಮತ್ತು ಸದಸ್ಯರೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ತಿಳಿಸಿದರು.
ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ಅವರು ಕರ್ನಾಟಕದಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರವು ಬೆಳೆದಿರುವ ಹಾಗೂ ಇನ್ನೂ ಹೆಚ್ಚಿನ ಬೆಳವಣಿಗೆಗೆ ಬೇಕಾದ ಸಾಮಾರ್ಥ್ಯವಿದ್ದು ಅದಕ್ಕೆ ಸಚಿವಾಲಯದ ಬೆಂಬಲ ಕೋರಿದರು. ಕೋಳಿ ಸಾಕಾಣಿಕೆ ಕ್ಷೇತ್ರದಲ್ಲಿ ಕೆಪಿಎಫ್‍ಬಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಕೋಳಿ ಸಾಕಾಣೆದಾರರಿಗೆ ಪ್ರಯೋಜನವಾಗುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಸಚಿವರು ತಿಳಿಸಿದರು. ಕೆಪಿಎಫ್‍ಬಿಎ ನಿಯೋಗ ಸಚಿವ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿತು. ಈ ಸಂದರ್ಭ ಎಸ್.ಆರ್.ಆಗ್ರೋ ಫಾರ್ಮ್ಸ್‍ನ ರಾಜೇಶ್ ರೆಡ್ಡಿ ಮತ್ತು ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು