4:31 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಕುಳಾಯಿ-ಹೊನ್ನಕಟ್ಟೆ: 98 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

04/01/2023, 22:46

ಸುರತ್ಕಲ್(reporterkarnataka.com): ಕುಳಾಯಿ ಹೊನ್ನಕಟ್ಟೆ ಮಸೀದಿ ಪಕ್ಕದ ರಸ್ತೆ ಕಾಮಗಾರಿ ಸಹಿತ 98 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತಾಡಿದ ಶಾಸಕರು, “ಕುಳಾಯಿ ಹೊನ್ನಕಟ್ಟೆ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಒಂದು ತಿಂಗಳೊಳಗೆ ಮುಗಿಯಲಿದೆ. ಆ ಬಳಿಕ ಸುರತ್ಕಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಸುರತ್ಕಲ್ ಕ್ಷೇತ್ರವನ್ನು ಮಾದರಿಯನ್ನಾಗಿ ಪರಿವರ್ತಿಸಲು ವಿವಿಧ ವಾರ್ಡ್ ಗಳಲ್ಲಿ ರಸ್ತೆ ಅಭಿವೃದ್ಧಿ, ಪಾರ್ಕ್, ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ” ಎಂದರು.

ಕಾರ್ಪೋರೇಟರ್ ವರುಣ್ ಚೌಟ, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು