5:34 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು