1:40 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು