4:30 PM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು