2:05 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು