9:54 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು