7:12 PM Sunday3 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು