3:23 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು