6:47 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು