3:20 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು