1:21 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು