3:51 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು