6:26 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು