8:08 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು