11:08 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್: ಡಿ. 10ರಂದು ಹೊರಕಾಣಿಕೆ ಮೆರವಣಿಗೆ; 11ರಂದು ಅನ್ನ ಸಂತರ್ಪಣೆ

08/12/2023, 21:58

ಮಂಗಳೂರು(reporterkarnataka.com): ನಗರದ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್‌ 11ರಂದು ಅನ್ನ ಸಂತರ್ಪಣೆ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಡಿ. 10 ರಂದು ನಡೆಯಲಿದೆ.
ಹೊರೆ ಕಾಣಿಕೆ ಮೆರವಣಿಗೆಯು ಅಂದು ಅಪರಾಹ್ನ 3.30 ಕ್ಕೆ ಬಿಕರ್ನಕಟ್ಟೆಯ ಬಾಲ ಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಡಲಿದೆ. 4 ವಾರ್ಡ್ ಒಳಗೊಂಡ 11 ವಲಯಗಳು ಹೊರಕಾಣಿಕೆಯನ್ನು ತರಲಿವೆ. ಈ ಮೆರವಣಿಗೆಯಲ್ಲಿ ಭಾಗವಹಿಸಿ ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ ಆಶೀರ್ವಾದಗಳನ್ನು ಪಡೆಯ ಬೇಕೆಂದು ವಿನಂತಿಸಲಾಗಿದೆ.

ಡಿ. 11ರಂದು ಕುಲ್ಯರ್ದ ಅಜ್ಜೆರ್ ಅವರ 146ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ರೈ.ರೆ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು