11:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್: ಡಿ. 10ರಂದು ಹೊರಕಾಣಿಕೆ ಮೆರವಣಿಗೆ; 11ರಂದು ಅನ್ನ ಸಂತರ್ಪಣೆ

08/12/2023, 21:58

ಮಂಗಳೂರು(reporterkarnataka.com): ನಗರದ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್‌ 11ರಂದು ಅನ್ನ ಸಂತರ್ಪಣೆ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಡಿ. 10 ರಂದು ನಡೆಯಲಿದೆ.
ಹೊರೆ ಕಾಣಿಕೆ ಮೆರವಣಿಗೆಯು ಅಂದು ಅಪರಾಹ್ನ 3.30 ಕ್ಕೆ ಬಿಕರ್ನಕಟ್ಟೆಯ ಬಾಲ ಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಡಲಿದೆ. 4 ವಾರ್ಡ್ ಒಳಗೊಂಡ 11 ವಲಯಗಳು ಹೊರಕಾಣಿಕೆಯನ್ನು ತರಲಿವೆ. ಈ ಮೆರವಣಿಗೆಯಲ್ಲಿ ಭಾಗವಹಿಸಿ ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ ಆಶೀರ್ವಾದಗಳನ್ನು ಪಡೆಯ ಬೇಕೆಂದು ವಿನಂತಿಸಲಾಗಿದೆ.

ಡಿ. 11ರಂದು ಕುಲ್ಯರ್ದ ಅಜ್ಜೆರ್ ಅವರ 146ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ರೈ.ರೆ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು