5:30 PM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್ ಶತಮಾನೋತ್ತರ ಸುವರ್ಣ ಮಹೋತ್ಸವ ಮತ್ತು ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿ: ಹೊರೆ ಕಾಣಿಕೆ ಮೆರವಣಿಗೆ

10/12/2023, 23:56

ಮಂಗಳೂರು(reporterkarnataka.com): ಮಂಗಳೂರಿನ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146 ನೇ ಪುಣ್ಯತಿಥಿ ಆಚರಣೆ ಹಾಗೂ ಅನ್ನ ಸಂತರ್ಪಣೆ ಡಿಸೆಂಬರ್‌ 11ರಂದು ಸೋಮವಾರ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಭಾನುವಾರ ನಡೆಯಿತು.

ಬಿಕರ್ನಕಟ್ಟೆಯ ಬಾಲಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಟ ಹೊರೆ ಕಾಣಿಕೆ ಮೆರವಣಿಗೆಯಲ್ಲಿ 11 ವಲಯಗಳ ತಲಾ 4 ವಾರ್ಡ್ ಗಳ ಸಹಸ್ರಾರು ಮಂದಿ ಭಕ್ತರು ಭಾಗವಹಿಸಿದ್ದರು.
ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯಸ್ಮರಣೆಯ ಪ್ರಯುಕ್ತ ಡಿಸೆಂಬರ್ 11ರಂದು ಸೋಮವಾರ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು