8:06 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು