5:47 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ

15/11/2021, 11:08

ಮಂಗಳೂರು(reporterkarnataka.com): ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರದ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಆ ಪ್ರಯುಕ್ತ ಭಾನುವಾರ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಜಂಟಿಯಾಗಿ ಭಜನೆ, ಗೋಪೂಜೆ,ಹಾಗೂ ಸತ್ಯನಾರಾಯಣ ಮಹಾಪೂಜೆ ಕಾರ್ಯಕ್ರಮ ನಡೆಸಿತು.

ಬೆಳಿಗ್ಗೆ ದೇವಸ್ಥಾನದ ತಂತ್ರಿಗಳಾಗಿರುವ ಶ್ರೀಹರಿ ಉಪಾಧ್ಯಾಯರ  ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಜನಾರ್ದನ್ ಭಟ್ ಅವರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ಅಧ್ಯಕ್ಷ ಮಯೂರ ಉಳ್ಳಾಲ್ ದಂಪತಿ ಗೋ ಪೂಜೆ ನೆರವೇರಿಸಿದರು.

ಜಿಲ್ಲಾ ಕುಲಾಲ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎ. ಸಾಲ್ಯಾನ್ ಮತ್ತು ಪದಾಧಿಕಾರಿಗಳು ಸದಸ್ಯರು ಹಾಗೂ ವೀರನಾರಾಯಣ ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಮನೋಜ್ ಮತ್ತು ಪದಾಧಿಕಾರಿಗಳು ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ನಂತರ ಶ್ರೀ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ ನೆರವೇರಿತು. ಪೂಜೆ ನಡೆದ ಬಳಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರು ಮಯೂರ್ ಉಳ್ಳಾಲ್ ಮಾತನಾಡಿ, ಶ್ರೀ ವೀರನಾರಾಯಣ ಕ್ಷೇತ್ರ ಸಮಸ್ತ ಹಿಂದೂ ಬಾಂಧವರ ಕ್ಷೇತ್ರವಾಗಿದೆ. ಆದರೆ ಇತಿಹಾಸದಿಂದಲೇ ಕ್ಷೇತ್ರವನ್ನು ಕುಲಾಲ ಸಮಾಜ ಬಂಧುಗಳು ಆಡಳಿತವನ್ನು ನಡೆಸುತ್ತ ಬಂದಿದ್ದಾರೆ ಮುಂದೆಯೂ ನಡೆಸುತ್ತೇವೆ.  ಕ್ಷೇತ್ರ ಜೀರ್ಣೋದ್ಧಾರ ಆಗಬೇಕೆಂದು ಸಂಕಲ್ಪ ಮಾಡಿದ್ದೇವೆ. ಮುಂದಿನ ತಿಂಗಳು ಜೀರ್ಣೋದ್ಧಾರದ ದೊಡ್ಡ ಮಟ್ಟಿನ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಅದಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುಲಾಲ ಸಮಾಜ ಬಾಂಧವರು ಸೇರುವವರು ಇದ್ದಾರೆ.  ಕ್ಷೇತ್ರದಲ್ಲಿ ಕೆಲವೇ ದಿನಗಳ ಹಿಂದೆ ಭಜನೆ ಸತ್ಯನಾರಾಯಣ ಪೂಜೆ ಗೋಪೂಜೆ ಮಾಡಬೇಕೆಂದು ನಿರ್ಧಾರ ಮಾಡಿದ್ದೆವು. ಅದಕ್ಕೆ ಸಾವಿರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಸೇರಿಕೊಂಡಿರುವುದು ಅಭಿಮಾನ ತಂದಿದೆ. ದೇಶ ವಿದೇಶಗಳಿಂದ ಸಮಾಜಬಾಂಧವರು ಕ್ಷೇತ್ರದ ಮೇಲೆ ಭಕ್ತಿಯಿಂದ ಸಹಕಾರವನ್ನು ನೀಡುವ ಭರವಸೆ ನೀಡಿದ್ದಾರೆ. ಶ್ರೀ ವೀರನಾರಾಯಣ ಕ್ಷೇತ್ರ ಕುಲಾಲರ ಅಸ್ಮಿತೆ ಎಂದು ನುಡಿದರು.


ವೇದಿಕೆಯಲ್ಲಿ ದೇವಾಲಯದ ಆಡಳಿತ ಮೊಕ್ತೇಸರರಾದ ಪುರುಷೋತ್ತಮ್ ಕುಲಾಲ್,  ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಎ. ದಾಮೋದರ, ವೀರನಾರಾಯಣ ಸೇವಾ ಟ್ರಸ್ಟ್ ಕಾರ್ಯಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್,  ವೀರನಾರಾಯಣ ಸೇವಾ ಸಮಿತಿ ಅಧ್ಯಕ್ಷ ಸುಂದರ ಕುಲಾಲ್,  ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಗೀತಾ ಮನೋಜ್ , ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಸಾಲ್ಯಾನ್ ಹಾಗೂ ದಯಾನಂದ ಅಡ್ಯಾರ್ , ಎಂ.ಪಿ. ಬಂಗೇರ, ರಾಮಣ್ಣ ಉಪ್ಪಿನಂಗಡಿ,
ಪುಂಡರೀಕಾಕ್ಷ, ಭಾಸ್ಕರ್ ಪೆರುವಾಯಿ, ಸುರೇಶ್ ಕುಲಾಲ್ ಬಂಟ್ವಾಳ, ಸುರೇಶ್ ಕುಲಾಲ್ ಮಳಲಿ, ಬಿಜೆಪಿಯ ಹಿರಿಯ ನಾಯಕಿ ರೂಪಾ ಡಿ ಬಂಗೇರ,  ನಾಗೇಶ್ ಕುಲಾಲ್ ಕುಲಾಯಿ, ಕಿರಣ್ಅಟ್ಲೂರು,ಉದ್ಯಮಿ ಅನಿಲ್ ದಾಸ್  ಸುರೇಶ್ ಕುಲಾಲ್ ಮಂಗಳಾದೇವಿ ಮತ್ತಿತರರು ಉಪಸ್ಥಿತರಿದ್ದರು.

ನವೀನ್ ಕುಲಾಲ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಬಸ್ತಿ ವಂದಿಸಿದರು.

ಇದೇ ಸಂದರ್ಭ ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದಿಂದ ಮಣ್ಣಿನಿಂದ ತಯಾರಿಸಲಾದ ಮಣ್ಣಿನ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು